Breaking News

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲೂ ಸರ್ಕಾರ ಮುಂಜಾಗ್ರತ ಕ್ರಮ…

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲೂ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ‘ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದೊಂದಿಗೂ ಚರ್ಚೆ ನಡೆದಿದೆ. ಅರವತ್ತು ವರ್ಷ ಮೇಲ್ಪಟ್ಟವರು ಜಾಗರೂಕತೆಯಿಂದಿರಬೇಕು. ಬೇರೆ ಬೇರೆ ಆರೋಗ್ಯ ಸಮಸ್ಯೆ ಇರುವವರು ಹೆಚ್ಚು ಕಾಳಜಿ ವಹಿಸಬೇಕು’ ಎಂದು ಹೇಳಿದರು.

ಜೊತೆಗೆ ‘ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಮುಖ್ಯ. ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವರಿಗೆ ತಿಳಿಸಿದ್ದೇನೆ. ಕೊರೊನಾ ಲಕ್ಷಣಗಳಿದ್ದರೆ ಮಾಸ್ಕ್ ಧರಿಸಬೇಕು. ಕೇಂದ್ರ ಸರ್ಕಾರ ತಜ್ಞರ ಜೊತೆ ಚರ್ಚೆ ಮಾಡಿದೆ. ವಿವಿಧ ಆರೋಗ್ಯ ಸಮಸ್ಯೆ ಇರುವವರು ಮಾಸ್ಕ್ ಧರಿಸಬೇಕು’ ಎಂದು ತಿಳಿಸಿದರು.

Share News

About BigTv News

Check Also

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು …

Leave a Reply

Your email address will not be published. Required fields are marked *