Breaking News

ಕಮಲ ಅರಳಲಿದೆ, ಕಾಂಗ್ರೆಸ್‌ ಮುಳಗಲಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಭವಿಷ್ಯ…

ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಾಖಲೆಯ ಬಹುಮತದೊಂದಿಗೆ ಮಗದೊಮ್ಮೆ ವಿರಾಜಮಾನರಾಗಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿಯುವುದು ಶತಸಿದ್ಧ. ಕಮಲ ಅರಳಲಿದೆ, ಕಾಂಗ್ರೆಸ್‌ ಮುಳಗಲಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಭವಿಷ್ಯ ನುಡಿದಿದೆ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ರಾಜ್ಯದ ಅಭಿವೃದ್ಧಿಯನ್ನೇ ಯೋಚಿಸದೆ ಅರಾಜಕತೆ ಸೃಷ್ಟಿಸಿ ಸಮಸ್ಯೆಗಳ ಸಾಗರವನ್ನೇ ಹುಟ್ಟು ಹಾಕಿ ಎಲ್ಲಾ ವರ್ಗದ ಜನರಿಂದ ಜನಾಕ್ರೋಶ ಎದುರಿಸುತ್ತಿದೆ. ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಸಿದ್ದರಾಮಯ್ಯರವರಿಗೆ ತಮ್ಮ ದುರಾಡಳಿತದಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗುತ್ತಿದ್ದಂತೆಯೇ ದೆಹಲಿಗೆ ಓಡಿ ಹೋಗಿ ಸಮಸ್ಯೆಗಳನ್ನು ಬದಿಗೊತ್ತಿ ಈಗ ವಿಷಯಾಂತರಕ್ಕೆ ಕೈ ಹಾಕಿರುವುದು ಮತಿಗೇಡಿತನ. ಸಿದ್ದರಾಮಯ್ಯರವರೇ, ತಾವು ಎಷ್ಟೇ ಸುಳ್ಳಿನ ಸರಪಳಿಯನ್ನು ಸೃಷ್ಟಿಸಿದರೂ ನಾಡಿನ ಜನ ನಂಬುವುದಿಲ್ಲ ಎಂದು ಬಿಜೆಪಿ ಹೇಳಿದೆ.

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *