ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಒಟ್ಟು ಸುಮಾರು ಜಿಲ್ಲೆಗಳು ಬೆಳಕು ಕೊಡುವ ಹೆಸ್ಕಾಂ ನಲ್ಲಿಯೇ ಅಕ್ರಮದ ಕತ್ತಲು ಕವಿದಿದೆ. ಈ ಇಲಾಖೆಯಲ್ಲಿಯೇ ಬೇಲಿಯೇ ಎದ್ದು ಹೊಲ ಮೆಯ್ದ ಪ್ರಕರಣ ಬೆಳಕಿಗೆ ಬಂದಿದೆ. ಕೋಟ್ಯಂತರ ರೂಪಾಯಿ ಇಲ್ಲಿ ಅಕ್ರಮ ನಡೆದಿದೆ. ಈ ಕುರಿತು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವುದಾಗಿ ಸ್ವತಃ ಹುಬ್ಬಳ್ಳಿ ಧಾರವಾಡ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಸುಳ್ಳು ದಾಖಲೆ ಸೃಷ್ಟಿಸಿ ಕರೆಂಟ್ ನೀಡುವ ಇಲಾಖೆಗೆ ಶಾಕ್ ಕೊಡಲಾಗಿದೆ. ಬರೊಬ್ಬರಿ 51 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ( ಹೆಸ್ಕಾಂ ) ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದರು. ಅಧಿಕಾರಿಗಳನ್ನು ಅಮಾನತು ಮಾಡಿ ಸಮಿತಿ ಮಾಡಿ ತನಿಖೆ ಮಾಡಲಾಗುತಿದೆ. ಯಾರು ಯಾರು ಈ ಹಗರಣದಲ್ಲಿ ಶಾಮೀಲು ಆಗಿದ್ದಾರೆ. ಇದೊಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಇತಿಹಾಸದಲ್ಲಿಯೇ ದೊಡ್ಡ ಪ್ರಕರಣ ಆಗಿದೆ. ಎಲ್ಲ ಆಯಾಮಗಳ ಮೇಲೆ ತನಿಖೆ ಮಾಡಲಾಗುತ್ತಿದೆ.