ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಟೀಮ್ ಇಂಡಿಯಾ ಅಂಗಳದಿಂದ ಎರಡು ದೊಡ್ಡ ಸುದ್ದಿ ಬಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ಗಳ ಸರಣಿಯಿಂದ ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣಗಳಿಗೆ ತವರಿಗೆ ಮರಳಿದ್ದಾರೆ.
ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರಿಂದ ಇವರು ಆತಿಥೇಯರ ವಿರುದ್ಧ ನಡೆಯಲಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಆಡುವುದಿಲ್ಲ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳ ಪ್ರಕಾರ, ಯುವ ಆರಂಭಿಕ ಬ್ಯಾಟ್ಸ್ಮನ್ ಬೆರಳಿನ ಗಾಯದಿಂದ ಚೇತರಿಸಿಕೊಂಡಿಲ್ಲ. ಈ ಕಾರಣಕ್ಕಾಗಿ, ಅವರನ್ನು ತಂಡದ ಆಡಳಿತವು ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾಕ್ಕೆ ಟೆಸ್ಟ್ ಸರಣಿಗಾಗಿ ತೆರಳಿದ್ದ ಕೊಹ್ಲಿ ಕುಟುಂಬದಲ್ಲಿ ಉಂಟಾದ ತುರ್ತು ಪರಿಸ್ಥಿತಿಯಿಂದಾಗಿ ಭಾರತಕ್ಕೆ ಮರಳಬೇಕಾಯಿತು ಎಂದು ತಿಳಿಸಿದೆ.