ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್ಗೆ ತೆರೆ ಬಿದ್ದಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿ ಕನ್ನಡ ಚಲನಚಿತ್ರ ಕಪ್ ಗೆದ್ದು ಬೀಗಿದೆ. ಡಿಸೆಂಬರ್ 24 ರಿಂದ ಡಿಸೆಂಬರ್ 26 ರವರೆಗೆ ನಡೆದ ಅದ್ದೂರಿ ಕನ್ನಡ ಚಲನಚಿತ್ರ ಕಪ್ಗೆ ತೆರೆ ಬಿದ್ದಿದೆ. ಶಿವರಾಜ್ ಕುಮಾರ್, ಸುದೀಪ್, ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ಡಾಲಿ ಧನಂಜಯ ನಾಯಕತ್ವದಲ್ಲಿ ಆರು ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಸಿನಿಮಾ ತಾರೆಯರಿಗೆ ಸ್ಟಾರ್ ಕ್ರಿಕೆಟಿಗರು ಕೂಡ ಜೊತೆಯಾಗಿದ್ದರು. ಸುರೇಶ್ ರೈನಾ, ಎಸ್ ಬದ್ರಿನಾಥ್, ರಾಬಿನ್ ಉತ್ತಪ್ಪ, ತಿಲಕರತ್ನೆ ದಿಲ್ಷಾನ್, ಹರ್ಷಲ್ ಗಿಬ್ಸ್, ಮುರಳಿ ವಿಜಯ್ ಕೂಡ ಈ ಟೂರ್ನಿಯ ಭಾಗವಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





