ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿರುವ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಕಾರ್ಯಕ್ರಮವನನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲಿ ಒಂದಾದ ಯುವನಿಧಿ ಇದು ಜಾರಿಗೆ ತರಲಾಯಿತು. ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶ ಹೊಂದಿರುವ ಇದು ಯುವಕರಿಗೆ ಸಹಾಯ ವಾಗುವುದು ಎಂದರು. ಇದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ 2024 ರ ಜನವರಿ 12 ರಿಂದ ಹಣ ಅವರ ಖಾತೆಗೆ ಜಮಾ ಆಗಲಿದೆ. 2023 ರಲ್ಲಿ ಪಾಸಾದ ಪದವಿ ಹಾಗೂ ಡಿಪ್ಲೋಮ ಮಾಡಿ ಕೆಲಸ ಸಿಗದೇ ಇರರುವವರಿಗೆ ಅನ್ವಯವಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





