ಬೆಂಗಳೂರು: ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಬುಧವಾರ ಮೈಸೂರಿನಲ್ಲಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಮಹಿಳೆ ಇಬ್ಬರು ಲೋಕಸಭೆಯ ಅತಿಕ್ರಮಣದಾರರಲ್ಲಿ ಒಬ್ಬರಾದ ಡಿ ಮನೋರಂಜನ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಕಳೆದ 10 ದಿನಗಳಿಂದ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದೆಹಲಿ ಪೊಲೀಸರು ಮೈಸೂರಿನಲ್ಲಿರುವ ಮಹಿಳೆಯೊಬ್ಬರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಅವರ ಫೋನ್ ಕರೆ ದಾಖಲೆಗಳನ್ನು ಅಧ್ಯಯನ ಮಾಡಿದ ನಂತರ ಪೊಲೀಸರು ಮಹಿಳೆಯ ವಿವರಗಳನ್ನು ಕಂಡುಕೊಂಡಿದ್ದಾರೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಮನೋರಂಜನ್ ಆ ಮಹಿಳೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಇಬ್ಬರೂ ಸುದೀರ್ಘ ಸಂಭಾಷಣೆ ನಡೆಸಿದ್ದರು. ಇದು ಆಕೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ದೆಹಲಿ ಪೊಲೀಸರಿಗೆ ಆಸಕ್ತಿಯನ್ನುಂಟು ಮಾಡಿದೆ. ಮನೋರಂಜನ್ ಜೊತೆಗಿನ ಸಂಬಂಧ ಮತ್ತು ಅವರ ಸುದೀರ್ಘ ಸಂಭಾಷಣೆಗೆ ಕಾರಣವೇನು ಎಂದು ಪೊಲೀಸರು ಮಹಿಳೆಯನ್ನು ಪ್ರಶ್ನಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





