ಬೆಂಗಳೂರು: ಹೊಸ ವರುಷದ ಆಚರಣೆ ಹಾಗೂ 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ.ಬೆಂಗಳೂರು ಮಹಾನಗರ ಸಾರಿಗೆ ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಬಿಎಂಟಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರು ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳನ್ನು ಬಿಎಂಟಿಸಿ ವಜಾ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





