ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಂಗಳವಾರ ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಬಗ್ಗೆ ಮಾತನಾಡಿ ಅವರೊಂದಿಗೆ ಮಾತನಾಡಿದ್ದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂದು ಬೇಡಿಕೆ ಇದೆ. ಖಾಯಂ ಮಾಡುವುದು ಕಷ್ಟದ ಕೆಲಸ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





