ಧಾರವಾಡ ಲೋಕಸಭಾ ಕ್ಷೇತ್ರದ ತಾಲ್ಲೂಕು ಗಳಿಗೆ ವಿಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಟಿ
ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ ಲ್. ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಬೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಇನ್ನು ಅಂತಿಮವಾಗಿಲ್ಲ,ಸೂಕ್ತ ಅಭ್ಯರ್ಥಿ ಹುಡುಕಾಟ ದಲ್ಲಿರುವ ಕಾಂಗ್ರೆಸ್ ಪಾಳಯದಲ್ಲಿ ಇದೀಗ ರಜತ್ ಉಳ್ಳಾಗಡ್ಡಿ ಮಠ ಹಾಗೂ ಶಿವಲೀಲಾ ಕುಲಕರ್ಣಿ ಹೆಸರು ಅಂತಿಮ ಎರಡರಲ್ಲಿ ಇದ್ದು ಇದರ ಬೆನ್ನಲ್ಲೇ ಸಚಿವರ ಓಡಾಟ ಆರಂಭವಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

