Breaking News

ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿಭೇದಿ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ….

ವಿಜಯನಗರ : ಇಷ್ಟು ದಿನ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುವ ಘಟನೆಗಳು ಹೆಚ್ಚಾಗಿ ರಾಯಚೂರಿನಲ್ಲಿ ಕಂಡು ಬರುತ್ತಿದ್ದವು. ಈಗ ಆ ನೀರು ವಿಜಯನಗರಕ್ಕೂ ಹರಿದಿದೆ. ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು ಅನ್ನೋ ಹಾಗೆ ಈಗ ಅಧಿಕಾರಿಗಳು ನೀರು ಪರಿಶೀಲನೆಗೆ ಮುಂದಾಗಿದ್ದಾರೆ.

ನೀರು ಮನುಷ್ಯನಿಗೆ ಅತ್ಯಗತ್ಯವಾದ ಜೀವಜಲ. ಆದರೆ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುತ್ತಿರುವ ಘಟನೆಗಳು ಆಗಾಗ ರಾಜ್ಯದಲ್ಲಿ ಕಂಡು ಬರುತ್ತಿದ್ದು ಆತಂಕಕ್ಕೆ ಎಡೆಮಾಡಿವೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಕಾರಿಗನೂರು ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿಭೇದಿ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮಾತ್ರವಲ್ಲದೆ ನಗರದ 24ನೇ ವಾರ್ಡ್ ಕಾರಿಗನೂರು ಗ್ರಾಮದಲ್ಲಿ ವಾಂತಿಬೇಧಿಯಿಂದಾಗಿ 27 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಶಾಸಕ ಎಚ್. ಆರ್. ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *