ರಾಯಚೂರು: ರಾಯಚೂರು ಅಂದರೆ ಸಾಕು ಬಿಸಿಲು, ಧೂಳು, ಗುಂಡಿ ಬಿದ್ದ ರಸ್ತೆಗಳು ನೆನಪಿಗೆ ಬರುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಿರ್ಮಾಣಗೊಂಡ ರಸ್ತೆಯೊಂದು ಕೆಲವೇ ದಿನಗಳಲ್ಲಿ ಎಥಾ ಸ್ಥಿತಿಗೆ ತಲುಪಿದ ಘಟನೆ ನಡೆದಿದೆ. ಇದರಿಂದ ಜನ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕವಿತಾಳ ಸಮೀಪದ ಮಲ್ಲದಗುಡ್ಡ ಗ್ರಾಮದಿಂದ ತೋರಣದಿನ್ನಿ ಸಂಪರ್ಕಿಸುವ ಮುಖ್ಯ ರಸ್ತೆಯ ದುರಸ್ತಿ ಕಾಮಗಾರಿ ಕಳಪೆಯಾಗಿದ್ದು ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ರಸ್ತೆ ಹಾಳಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಗುತ್ತಿಗೆದಾರರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾನ್ವಿ ತಾಲ್ಲೂಕಿನ ಬ್ಯಾಗವಾಟ್ನಿಂದ ಮಸ್ಕಿ ತಾಲ್ಲೂಕಿನ ತೋರಣದಿನ್ನಿ ಸಂಪರ್ಕಿಸುವ 16 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಲೊಕೋಪಯೋಗಿ ಇಲಾಖೆ ವತಿಯಿಂದ ಎರಡು ಪ್ಯಾಕೇಜ್ಗಳಲ್ಲಿ ಇಬ್ಬರು ಗುತ್ತಿಗೆದಾರರಿಗೆ ವಹಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





