Breaking News

ಅಭಿಮಾನಿಗಳು ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಯಶ್ ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ…

ರಾಕಿಂಗ್ ಸ್ಟಾರ್ ಯಶ್ 38ನೇ ಹುಟ್ಟುಹಬ್ಬ. ಹೀಗಾಗಿ ದೇಶ ಮೂಲೆ ಮೂಲೆಯಲ್ಲಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಯುವಕರು ಮಧ್ಯರಾತ್ರಿ ಯಶ್ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಮೃತಪಟ್ಟಿದ್ದಾರೆ.

ಸೂರಣಗಿ ಗ್ರಾಮದ ಮುರಳಿ ನಡವಿನಮನಿ (20), ಹನಮಂತ ಹರಿಜನ್ (21), ಹಾಗೂ ನವೀನ್ ಗಾಜಿ(19) ಈ ಮೂವರು ಮೃತ ಅಭಿಮಾನಿಗಳು. ಇನ್ನು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಗದಗದ ತಮ್ಮ ಅಭಿಮಾನಿಗಳು ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಯಶ್ ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಸುಮಾರು 3 ಗಂಟೆಗೆ ಯಶ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸಂಜೆ 4 ಗಂಟೆ ವೇಳೆಗೆ ರಸ್ತೆ ಮಾರ್ಗವಾಗಿ ಲಕ್ಷ್ಮೀಶ್ವರದ ಸೂರಣಗಿಯಲ್ಲಿರುವ ಮೃತ ಅಭಿಮಾನಿಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *