ಬೆಳಗಾವಿ: ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿ ಹೆಚ್ಚಾಗಿದೆ ವಾಹನ ಒಡಾಟ ಇದರಿಂದ ವಾ ಹನ ದಟ್ಟಣೆಯನ್ನು ತಡೆಯಲು ಫ್ಲೈಓವರ್ ನಿರ್ಮಾಣ ಮಾಡಲು ಮುಂದಾಗಿದೆ. ಅಲ್ಲದೆ ಜನರ ಸಂಚಾರಕ್ಕೆ ಅಡಚಣೆ ಅಗಬಾರದು .ಜನರು ಸುರಕ್ಷಿತ ವಾಗಿ ಒಡಾಡುವಂತೆ ಅನುಕೂಲ ವಾಗಲಿ ಎಂದು ಫ್ಲೈಓವರ್ ನಿರ್ಮಾಣ.
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





