ದಾವಣಗೆರೆ: ಮುಖ್ಯ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮಾತನಾಡಿರುವ ಕುರಿತು ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ನಾಯಕರು ವಾರ್ನಿಂಗ್ ನೀಡಿದ್ದಾರೆ. ಈ ಕುರಿತು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳ ಜೊತೆಗೆ ಕಾಂಗ್ರೆಸ್ ಮಾಜಿ ಶಾಸಕ ಎಸ್.ರಾಮಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಇನ್ನೊಮ್ಮೆ ಈ ರೀತಿ ಏಕವಚನದಲ್ಲಿ ಮಾತಾಡಿದರೆ ಅನಂತಕುಮಾರ ಹೆಗಡೆ ಎಲ್ಲಿ ಸಿಗುತ್ತಾರೆ ಅಲ್ಲಿ ಹಿಡಿದು ಹೊಡೆಯಲಾಗುವುದು ಎಂದು ವಾರ್ನಿಂಗ್ ನೀಡಿದ್ದಾರೆ.
ಅನಂತ ಕುಮಾರ ಏಕವಚನದಲ್ಲಿ ಮಾನ್ಯ ಮುಖ್ಯಮಂತ್ರಿಯನ್ನು ಕರೆಯಬಹುದೆ. ಅದು ತಪ್ಪು ಮುಖ್ಯಮಂತ್ರಿ ಗೆ ಗೌರವ ಕೊಡ್ಬೇಕು ಇಲ್ಲಾ ವಾದರೆ ನಾವು ಅವರಿಗೆ ಶಿಕ್ಷೆ ಕೊಡುತ್ತೇವೆ ಅದು ಏನೆಂದರೆ ಎಲ್ಲಿ ಸಿಕ್ಕಿದರೂ ಅಲ್ಲಿ ಹೊಡೆಯುತ್ತೇವೆ ಎಂದರು. ದಾವಣಗೆರೆ ಯಲ್ಲಿ ಮಾತನಾಡಿದ ಅವರು ಅನಂತ ಕುಮಾರ ಹೆಗಡೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ಯ ಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





