ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿರಾಟ್ ಕೊಹ್ಲಿ ಒಂದು ದಿನದ ರಜೆ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಭಾರತದ ಅಗ್ರ ಬ್ಯಾಟ್ಸ್ಮನ್ ಈಗಾಗಲೇ ಬಿಸಿಸಿಐ ಅನುಮತಿಯನ್ನು ಸಹ ಕೋರಿದ್ದಾರೆ.ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಟಿ20 ಪಂದ್ಯಕ್ಕೆ ತಯಾರಿ ನಡೆಸಿದೆ. ಜನವರಿ 17 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯದ ನಂತರ, ರೋಹಿತ್ ಶರ್ಮಾ ಮತ್ತು ತಂಡವು ಜನವರಿ 20 ರಂದು ಹೈದರಾಬಾದ್ಗೆ ತೆರಳಲಿದೆ. ಅಲ್ಲಿ ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಭಾರತ ತಂಡ ಹೈದರಾಬಾದ್ನಲ್ಲಿ ಅಭ್ಯಾಸ ಸೆಷನ್ ಆಯೋಜಿಸಲಾಗಿದೆ.ವಿರಾಟ್ ಕೊಹ್ಲಿ ಕೂಡಾ ರಾಮ ಮಂದಿರ ಉದ್ಘಾಟನೆ ಒಂದು ದಿನ ರಜಾ ಹಾಕಿ ಬರುವ ಬಗ್ಗೆ ಕ್ರಿಕೆಟ್ ಮಂಡಳಿ ಗೆ ಅವರು ಕೇಳಿದ್ದಾರೆ ಎನ್ನಲಾಗಿದೆ. ಭಾರತ ತಂಡ ಈಗಾಗಲೇ ಅಘಾನ್ ವಿರುದ್ಧ ಟಿ 20 ಪದ್ಯ ಆಡುತ್ತಿದ್ದು.ಮುಂದೆ ಟೆಸ್ಟ್ ಮ್ಯಾಚ್ ಗೆ ಸಿದ್ಧತೆ ನಡೆಸಿದೆ..
Check Also
ರಥದ ಚಕ್ರಕ್ಕೆ ಸಿಲುಕಿ ಓರ್ವ ಸಾವು: ಇನ್ನಿಬ್ಬರು ಪ್ರಾಣಾಪಾಯದಿಂದ ಪಾರು…!
ಹುಬ್ಬಳ್ಳಿ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ನಡೆದಿದೆ.ಬಸವ …