Breaking News

ಅಯೋಧ್ಯೆ ರಾಮಮಂದಿರಕ್ಕೆ ನಟ ಪ್ರಭಾಸ್ 50 ಕೋಟಿ ರೂ. ದೇಣಿಗೆ..?

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ ಇದೇ ತಿಂಗಳ 22ಕ್ಕೆ ಸಮೀಪಿಸುತ್ತಿದ್ದಂತೆ ಕೋಟ್ಯಂತರ ಭಾರತೀಯರಲ್ಲಿ ಉತ್ಸಾಹ ಮುಗಿಲು ಮುಟ್ಟಿದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿದ್ದಾರೆ. ರಾಮಮಂದಿರ ತೆರೆಯುವ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಸುಮಾರು 300 ಸ್ಥಳಗಳಿಗೆ ಅನ್ನದಾನ ವ್ಯವಸ್ಥೆ ಮಾಡಲಾಗುತ್ತಿದೆ. ದೇವಾಲಯ ತೆರೆಯುವ ದಿನದಂದು ಪ್ರಭಾಸ್ ದೇಣಿಗೆ ನೀಡಲಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಅಯೋಧ್ಯೆ ಪ್ರತಿಷ್ಠಾ ದಿನದಂದು ಆಹಾರದ ವೆಚ್ಚ ಬರೋಬ್ಬರಿ 50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ಪ್ರಭಾಸ್ ಸಂಪೂರ್ಣ ವೆಚ್ಚವನ್ನು ಭರಿಸಲು ನಿರ್ಧರಿಸುವ ಮೂಲಕ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಎಲ್ಲಾ ಭಕ್ತರಿಗೆ ಔತಣವನ್ನು ಏರ್ಪಡಿಸುವ ವ್ಯವಸ್ಥೆ ವಹಿಸಿಕೊಂಡಿದ್ದಾರೆ . ಸುಮಾರು 50 ಕೋಟಿ ರೂಪಾಯಿಗಳ ಅಂದಾಜು ವೆಚ್ಚದೊಂದಿಗೆ ನಟನು ಊಟಕ್ಕೆ ಹಣವನ್ನು ನೀಡುತ್ತಾರೆ ಎನ್ನಲಾಗಿದೆ. ಆದರೆ, ಇದು ಸುಳ್ಳು ಸುದ್ದಿ ಎಂದು ರಾಷ್ಟ್ರೀಯ ಮಾಧ್ಯಮವೊಂದು, ನಟನ ತಂಡದೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *