Breaking News

ಬಿಜೆಪಿ ವಿರುದ್ದ ಲಾಡ್ ಸಮರ…

ಹುಬ್ಬಳ್ಳಿ: ಸರ್ಧಾರ ವಲಭಬಾಯಿ ಪಟೇಲ್ ಅವರು ಈ ಹಿಂದೆಯೇ ಆರ್.ಎಸ್.ಎಸ್ ಬ್ಯಾನ್ ಮಾಡಿದ್ದರು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇದೀಗ ಸರ್ಧಾರ ವಲಭಬಾಯಿ ಪಟೇಲರ ಪ್ರತಿಮೆಯನ್ನು ನಿಲ್ಲಿಸಿದ್ದಾರೆ. ಆದರೆ ಅವರೇ ಆರ್.ಎಸ್.ಎಸ್ ಅನ್ನು ಬ್ಯಾನ್ ಮಾಡಿದ್ದರು. ಇದು ಸುಳ್ಳಲ್ಲಾ, ಇದಕ್ಕೆ ಪೂರಕವಾದ ದಾಖಲೆಗಳಿವೆ ಎಂದರು.ಬಿಜೆಪಿಯವರು ಚುನಾವಣೆ ಬಂದಾಗೊಮ್ಮೆ ಜಾತಿ ಧರ್ಮ ಮಂದೆ ತಂದು ಅಧಿಕಾರಕ್ಕೆ ಬರತ್ತಾರೆ. ಅಭಿವೃದ್ಧಿ ಬಗ್ಗೆ ಚೆಕಾರ್ ಎತ್ತುವುದಿಲ್ಲ, ಇಂದು ಪಾಸ್ ಪೋರ್ಟ್ ಪವರ್’ನಲ್ಲಿ ದೇಶ 85 ನೇ ಸ್ಥಾನಕ್ಕಿದೆ. ವಿಶ್ವಗುರು ಎಂದು ಕರೆಸಿಕೊಳ್ಳುವ ನಮ್ಮ ಪ್ರಧಾನಿ ದೇಶವನ್ನು ಯಾಕೆ ಒಂದನೇ ಸ್ಥಾನದಲ್ಲಿ ತರಲಿಲ್ಲ. ಇಂದು ದೇಶವನ್ನು ಅಭಿವೃದ್ಧಿ ವಿಷಯದಲ್ಲಿ ಯಾವ ದೇಶಕ್ಕೆ ಹೋಲಿಸಬೇಕು, ಸುಖಾಸುಮ್ಮನೆ ಬಿಜೆಪಿ ಚುನಾವಣೆ ಹೊಸ್ತಿಲಲ್ಲಿ ಅಭಿವೃದ್ಧಿ ಬಗ್ಗೆ ಮಾತನಾಡದೇ ವಿವಾದಾತ್ಮಕ ಹೇಳಿಕೆ ನೀಡುತ್ತಾರೆ ಎಂದು ಹರಿಹಾಯ್ದರು.ಇಂದು ಮೆಕ್ ಇನ್ ಇಂಡಿಯಾ ಹಳ್ಳ ಹಿಡಿದಿದೆ. ಇದರ ಪ್ರಚಾರಕ್ಕಾಗಿ ಕೇಂದ್ರ ಸರ್ಕಾರ 450 ಕೋಟಿ ರೂಪಾಯಿ ಖರ್ಚು ಮಾಡಿದೆ. ಈ ಬಗ್ಗೆ ಯಾಕೆ ಬಿಜೆಪಿಯವರು ಮಾತನಾಡುವುದಿಲ್ಲ ಎಂದು ಕಿಡಿಕಾರಿದರು.ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ರಾಜ್ಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಎಲ್ಲರ ಪಕ್ಷಾತೀತ ಸಹಕಾರದಿಂದ ಇಂದು ಬುಕ್ ಆಫ್ ರೆಕಾರ್ಡ್’ಗೆ ಸೇರ್ಪಡೆ ಆಗುತ್ತಿದೆ. ಇದು ಖುಷಿಯ ವಿಚಾರ

ಎಂದರು.ಇಂದು ಸಂಜೆ ನವಲಗುಂದದಲ್ಲಿ ಸಿಎಂ ಸಿದ್ದರಾಮಯ್ಯ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಶಾಸಕ ಎನ್.ಹೆಚ್.ಕೊನರೆಡ್ಡಿ ಅವರ ಮುತುವರ್ಜಿಯಿಂದ 40 ಎಕರೆ ಭೂಮಿಯಲ್ಲಿ ಬಡಕುಟುಂಬಗಳಿಗೆ ಮನೆ ನಿರ್ಮಿಸಿ ಹಕ್ಕುಪತ್ರ ನೀಡುತ್ತಿದ್ದಾರೆ. ಇದಲ್ಲದೇ 120 ಕಿ.ಮೀಗು ಅಧಿಕ ಹೊಲದ ರಸ್ತೆಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಇವೆಲ್ಲಾ ಕಾರ್ಯಕ್ಕೆ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಸಂತೋಷ ಲಾಡ್ ಹೇಳಿದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *