ಸಂಸದರಾದ ಮೇಲೆ ಲಿಂಗಾಯತರನ್ನು ಕಡೆಗಣಿಸಿಲ್ಲ; ಕೇಂದ್ರ ಸಚಿವ ಜೋಶಿ ಹುಬ್ಬಳ್ಳಿ: ಜೋಶಿ ಲಿಂಗಾಯತರನ್ನು ತುಳಿದಿದ್ದಾರೆ ಅನ್ನೋ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಹಿನ್ನೆಲೆಯಲ್ಲಿ, ನಾನು ಲೋಕಸಭಾ ಸದಸ್ಯನಾದ ಮೇಲೆ ಕ್ಷೇತ್ರದಲ್ಲಿ ಎಂಟರಲ್ಲಿ ಏಳು ಜನ ಲಿಂಗಾಯತರಿಗೆ ಟಿಕೆಟ್ ಕೊಡಲಾಗಿದೆ. ಎಲ್ಲಾ ಸಮುದಾಯಕ್ಕೂ ನಾವು ಅವಕಾಶ ಕೊಟ್ಟಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿಗಳ ಬಗ್ಗೆ ನನಗೆ ಶ್ರದ್ಧೆ ಇದೆ. ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಏನಾದರೂ ತಪ್ಪು ಮಾಡಿದ್ದರೆ ನೇರವಾಗಿ ಹೇಳಲಿ ಕ್ಷಮೆ ಕೇಳುತ್ತೇನೆ. ಸ್ವಾಮೀಜಿ ಏನು ಹೇಳಿದರೂ ನನಗೆ ಆಶಿರ್ವಾದ. ಈ ಸಂದರ್ಭದಲ್ಲಿ ನಾನು ಹೆಚ್ಚೇನೂ ಮಾತಾಡಲ್ಲ. ಸ್ವಾಮೀಜಿ ಸಮಯ ಕೊಟ್ಟರೆ ಅವರ ಜೊತೆ ಮಾತನಾಡಲು ನಾನು ತಯಾರಿದ್ದೇನೆ ಎಂದರು.- ಪ್ರಹ್ಲಾದ ಜೋಶಿ, ಕೇಂದ್ರ ಸಚಿವ.
Check Also
ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!
ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …
bigtvnews | Hubli Dharwad News | Kannada News | Karnataka News Hubli News | News In Hubli | Local news

