Breaking News
Featured Video Play Icon

ಎಸ್‌.ಟಿ ಮೋರ್ಚಾ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ: ಸಚಿವ ಪ್ರಹ್ಲಾದ ಜೋಶಿ, ಶ್ರೀರಾಮುಲು ಭಾಗಿ..

ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು.ಹೌದು‌.. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡುವಂತೆ ಮನವಿ ಮಾಡಲಾಯಿತು. ಅಲ್ಲದೇ ಲೋಕಸಭಾ ಕ್ಷೇತ್ರದ ಎಸ್‌ಟಿ ಮುಖಂಡರು ಹಾಗೂ ಬಹುತೇಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮಕ್ಕೆ ಮೆರಗನ್ನು ತಂದರು.ಇನ್ನೂ ಸಮಾವೇಶದಲ್ಲಿ ಎಸ್.ಟಿ ರಾಜ್ಯಾಧ್ಯಕ್ಷ ಹನುಮಂತರಾಜು, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ, ಎಂ.ಆರ್.ಪಾಟೀಲ ಸೇರಿದಂತೆ ಬಹುತೇಕ ನಾಯಕರು ಭಾಗವಹಿಸಿದ್ದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *