Breaking News

ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ವಿಶ್ವಮಾನವರ ದಿನಾಚರಣೆ: ಭರದಿಂದ ಸಾಗಿದ ಸಿದ್ಧತೆ…!

ಹುಬ್ಬಳ್ಳಿ: ಜನ್ಮದಿನದ ಸಂಭ್ರಮದಲ್ಲಿಯೂ ಬುದ್ಧ, ಬಸವ, ಅಂಬೇಡ್ಕರ್ ರ ತತ್ವಾದರ್ಶವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದ ಸಚಿವ ಸಂತೋಷ ಲಾಡ್ ಈಗ ಮತ್ತೊಂದು ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹೌದು..ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವಮಾನವರ

ದಿನಾಚರಣೆಯನ್ನು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯ ಅಂಗವಾಗಿ ವಿಶ್ವಮಾನವರ ದಿನಾಚರಣೆ ಆಯೋಜಿಸಲಾಗಿದ್ದು, ಈಗಾಗಲೇ ಸಕಲ‌

ಸಿದ್ಧತೆ ಕೂಡ ಮಾಡಲಾಗಿದೆ. ಸಚಿವ ಸಂತೋಷ ಲಾಡ್ ಅವರ ಅಭಿಮಾನ ಸಮರ್ಪಣೆಗಾಗಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ಸಂಗೀತ ನಿರ್ದೇಶಕ ಹಾಗೂ ಗೀತ ರಚನೆಕಾರ ಡಾ.ನಾಗೇಂದ್ರ ಪ್ರಸಾದ ಅವರಿಂದ ವಿಶೇಷ ಗೀತೆಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಮೂಲಕ ಸಚಿವ ಸಂತೋಷ ಲಾಡ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಯವರ ಗೆಲುವಿನ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.ಇನ್ನೂ ಹುಬ್ಬಳ್ಳಿಯ

ನೆಹರೂ ಮೈದಾನದಲ್ಲಿ ಈಗಾಗಲೇ ವೇದಿಕೆ ಸೇರಿದಂತೆ ಸಾರ್ವಜನಿಕರ ಆಸನಕ್ಕೆ ಸಕಲ ಸಿದ್ಧತೆ ನಡೆದಿದ್ದು, ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬಹುದೊಡ್ಡ ಸಮಾವೇಶ ನಡೆಯಲಿದ್ದು, ಬುದ್ಧ ಬಸವ ಅಂಬೇಡ್ಕರ್ ರ ತತ್ವ ಆದರ್ಶಗಳು ಮತ್ತೊಮ್ಮೆ ಮುನ್ನೆಲೆಗೆ ಬರಲಿದೆ.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *