Breaking News
Featured Video Play Icon

ಸಾವಿನ ಮನೆಯಲ್ಲಿ ರಾಜಕೀಯ ಬೇಡ: ವಚನಾನಂದ ಸ್ವಾಮೀಜಿ..

ಹುಬ್ಬಳ್ಳಿ; ನಮ್ಮ ನಾಡಿನ ಸುಸಂಸ್ಕೃತ ಮಹಿಳೆಯನ್ನು ಈ ರೀತಿಯಲ್ಲಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಈ ಮೂಲಕ ನಾನು ಆಗ್ರಹ ಮಾಡುತ್ತಿದ್ದೇನೆ. ಆರೋಪಿತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹರಿಹರದ ವಚನಾನಂದ ಸ್ವಾಮೀಜಿ ಹೇಳಿದರು.ಮೃತ ನೇಹಾ ಹಿರೇಮಠ‌ ಮನೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾವಿನ ಮನೆಯಲ್ಲಿ ಯಾರೂ ಕೂಡ ರಾಜಕೀಯ ಬೆಳೆ ಬೇಯಿಸಿಕೊಳ್ಳಬಾರದು‌‌. ಸಾವಿನ ಮನೆಯಲ್ಲಿ ರಾಜಕೀಯ ಆರೋಪ ಪ್ರತ್ಯಾರೋಪ ಮಾಡುವುದನ್ನು ನಿಲ್ಲಿಸಿ ಎಂದು ಎಚ್ಚರಿಕೆ ನೀಡಿದರು.ಇನ್ನೂ ಶಾಂತಿಯ ನಾಡಿನಲ್ಲಿ ಇಂತಹ ಅಮಾನವೀಯ ಘಟನೆ ಖಂಡನೀಯವಾಗಿದೆ. ಇದರಲ್ಲಿ ಆರೋಪಿತನ ಜೊತೆಗೆ ಆತನೊಂದಿಗೆ ಇರುವವರಿಗೂ ಕೂಡ ಕಠಿಣ ಶಿಕ್ಷೆ ವಿಧಿಸುವ ಕಾರ್ಯವನ್ನು ಮಾಡಬೇಕಿದೆ ಎಂದು ಅವರು ಹೇಳಿದರು‌.

Share News

About Shaikh BigTv

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *