ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟಿನ ಲಾ & ಆರ್ಡರ್ ಡಿಸಿಪಿಯಾಗಿ ಕುಶಾಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ನ ನೂತನ ಉಪ ಪೊಲೀಸ್ ಆಯುಕ್ತರಾಗಿ ( ಕಾನೂನು & ಸುವ್ಯವಸ್ಥೆ ) ಕುಶಾಲ್ವ ಚೌಕ್ಸೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು,

ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.ಕುಶಾಲ್ ಚೌಕ್ಸ್ 2018ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋ ಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರನ್ನು ಈಗ ಹುಬ್ಬಳ್ಳಿ ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಿದ್ದು, ಅಂಜಲಿ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ ಅಮಾನತು ಆಗಿದ್ದ

ಡಿಸಿಪಿ ಎಂ.ರಾಜೀವ್ ಅವರ ಅಮಾನತು ಹಿನ್ನೆಲೆ ಕುಶಾಲ್ ಅವರನ್ನು ರಾಜ್ಯ ಸರ್ಕಾರ ಇಂದು ನೇಮಕ ಮಾಡಿ ಆದೇಶ ಹೊರಡಿಸಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

