ಹೊಸಪೇಟೆ: ತುಂಗಭದ್ರಾ ಆಣೆಕಟ್ಟೆಯ 19 ನೇ ಕ್ರಸ್ಟ್ ಗೇಟ್ ಕೊಚ್ಚಿಹೋದ ಹಿನ್ನೆಲೆಯಲ್ಲಿ ಸೋಮುವಾರ ಜಲಾಶಯಕ್ಕೆ ದೌಡಾಯಿಸಿದ ಕೊಪ್ಪಳದ ಅಭಿನವ ಗವಿಸಿದ್ದೇಶ ಸ್ವಾಮೀಜಿ ಜಲಾಶಯ ವೀಕ್ಷಣೆ ಮಾಡಿದರು.
ತುಂಗಭದ್ರಾ ಆಣೆಕಟ್ಟೆಗೆ ಬಂದ ಶ್ರೀಗಳು ಆಣೆಕಟ್ಟೆಯ ಮೇಲೆ ವಾಹನದಲ್ಲಿ ತೆರಳದೇ ನಡೆದುಕೊಂಡೇ ಹೋಗಿ ಜಲಾಶಯ ವೀಕ್ಷಣೆ ಮಾಡಿದ್ದಾರೆ.ಗೇಟ್ ಕಿತ್ತುಹೋದ, ಮರು ಅಳವಡಿಕೆ ಬಗ್ಗೆ ಅಲ್ಲಿದ್ದ ಸಿಬ್ಬಂದಿಯಿಂದ ಗವಿಶ್ರೀಗಳು ಮಾಹಿತಿ ಪಡೆದರು. ಜಲಾಶಯದ ಸ್ಥಿತಿ ಗತಿ, ಈಗಿರುವ ಪರಿಸ್ಥಿತಿಯನ್ನು ಕಂಡುಕೊಂಡರು. ಕಲ್ಯಾಣ ಕರ್ನಾಟಕದ ನಾಲ್ಕು ಜಿಲ್ಲೆಯ ಜೀವನಾಡಿಯಾಗಿರುವ ಜಲಾಶಯಕ್ಕೆ ಇದೇ ಮೊದಲ ಬಾರಿಗೆ ಇಂತಹ ಅವಘಡ ಎದುರಾಗಿದ್ದು, ರೈತರಿಗೆ ಇದರಿಂದ ಆಗುವ ತೊಂದರೆಗಳ ಬಗ್ಗೆ ಆಲಿಸಿ ಮರಕುಪಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news

