ಬಳ್ಳಾರಿ : ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ಇರುವ ಮುನಿರಾಬಾದ್ ತುಂಗಭದ್ರಾ ಡ್ಯಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ತುಂಗಭದ್ರ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವುದಕ್ಕೆ ಅಧಿಕಾರಿಗಳೇ ಹೊಣೆ ಎಂದು ಆರೋಪಿಸಿದ್ದಾರೆ. ಈ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಉಪಸ್ಥಿತರಿದ್ದರು. ಜಲಾಶಯದಲ್ಲಿ ಕೊಚ್ಚಿ ಹೋಗಿರುವ ಗೇಟ್ ಸರಿಪಡಿಸುವ ಕೆಲಸ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

