ಹುಬ್ಬಳ್ಳಿ: ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘದ (ಕೆಆರ್ಡಿ) ನೇತೃತ್ವದಲ್ಲಿ ರಾಜ್ಯವ್ಯಾಪಿ ನಡೆದ ಮುಷ್ಕರದಲ್ಲಿ ಕಿಮ್ಸ್ ಆಸ್ಪತ್ರೆ ಕಿರಿಯ ವೈದ್ಯರು ಸಹ ಪಾಲ್ಗೊಂಡರು. ವಿನೂತನ ರೀತಿಯಲ್ಲಿ ಹೋರಾಟ ನಡೆಸಿದರು.
ತುರ್ತು ಚಿಕಿತ್ಸಾ ಘಟಕ, ಹೃದಯ ರೋಗ ವಿಭಾಗ ಹೊರತುಪಡಿಸಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಯಾರೂ ತೆರಳಲಿಲ್ಲ. ಸುಮಾರು 600 ಕಿರಿಯ ವೈದ್ಯರು ಸೇವೆಯಿಂದ ದೂರ ಉಳಿದಿದ್ದು, ಬೃಹತ್ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇನ್ನೂ ಸುಡುವ ಬಿಸಿಲಿನಲ್ಲಿಯೇ ವೈದ್ಯರು ಹೋರಾಟಕ್ಕೆ ಮುಂದಾಗಿದ್ದು, ಚೆನ್ನಮ್ಮ ವೃತ್ತದ ಬಳಿಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕೂಡಲೇ ಸರ್ಕಾರ ಎಚ್ಚೇತ್ತುಕೊಳ್ಳಬೇಕು ಇಲ್ಲವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





