Breaking News

ಪ್ರೀತಿಸಿ ಮದುವೆಯಾದ ಪತ್ನಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಬೆಂಗಳೂರು: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿದ್ದಾಳೆ. ಪ್ರೀತಿಸಿ ಮದುವೆಯಾದ ಪತಿಯಿಂದಲೆ ಪತ್ನಿಯ‌ ಕೊಲೆಯಾಗಿದೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಉತ್ತನಹಳ್ಳಿ ಬಳಿ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಮೃತ ದುರ್ದೈವಿ.

ಕಳೆದ ಎರಡು ವರ್ಷಗಳಿಂದ ದುರ್ಗಮ್ಮ ಮಾರುತಿ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಪೋಷಕರ ವಿರೋಧದ ನಡುವೆ ಮದುವೆಯಾಗಿ ನಂತರ ಎರಡು ಕುಟುಂಬಗಳು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ‌ ಮಾಡಿಕೊಂಡು ಜೀವನ ಮಾಡುತ್ತಿದ್ದರು.

ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಮಾರುತಿ ಹೊಡೆದು ಕಿರುಕುಳ ನೀಡುತ್ತಿದ್ದ. ಕಳೆದ ಒಂದು ತಿಂಗಳ ಹಿಂದೆಯೂ ಗಲಾಟೆ‌ ಮಾಡಿಕೊಂಡು ದುರ್ಗಮ್ಮ ಊರಿಗೆ ಹೋಗಿದ್ದಳು. ಆದರೆ 15 ದಿ‌ನಗಳ ಹಿಂದೆ ಪತ್ನಿಯ ಮನವೊಲಿಸಿ ಮಾರುತಿ ಬೆಂಗಳೂರಿಗೆ ಕರೆತಂದಿದ್ದ. ಇದೀಗ ದುರ್ಗಮ್ಮ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *