ಧಾರವಾಡ : ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹತ್ಯೆಗೆ ಸಂಚು ಖಂಡಿಸಿ ನಗರದ ಅಂಜುಮನ್ ಸಂಸ್ಥೆ ಆವರಣದಲ್ಲಿ ಪ್ರತಿಭಟನೆ ನಡೆಸಿ, ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ರೆವರೆಂಡ್ ಕೆ. ಕಾಂತರಾವ್, ಮೌಲಾನಾ ಮೊಹಮ್ಮದ್ ಯೂಸುಫ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪೊಲೀಸರ ಸೂಚನೆಯಂತೆ ಬೃಹತ್ ಮೆರವಣಿಗೆ ಮೊಟಕುಗೊಳಿಸಿ, ಹತ್ಯೆಗೆ ಸಂಚು ರೂಪಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

