ತುಮಕೂರು: ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ಶಾಲಾ ಬಸ್ ಹರಿದು 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.
ತೇಜಸ್(14) ಮೃತ ಬಾಲಕ. ಚಲಿಸುತ್ತಿದ್ದ ಬೈಕ್ನಿಂದ ಆಯತಪ್ಪಿ ಕೆಳಗೆ ಬಿದ್ದ ಬಾಲಕನ ತಲೆ ಮೇಲೆಯೇ ಬಸ್ ಹರಿದು ಈ ದುರ್ಘಟನೆ ಸಂಭವಿಸಿದೆ. ಇತ್ತ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

