ಧಾರವಾಡ: ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ “ದಾಖಲೆಗಳು ಮಾತಾಡುತ್ತಿವೆ’ ಕಿರು ಹೊತ್ತಿಗೆ ಲೋಕಾರ್ಪಣೆ ಮಾಡಿದರು. ಧಾರವಾಡ ನಗರದ ಸಮುದಾಯದ ಪರಿವರ್ತನಾ ಕಚೇರಿಯಲ್ಲಿ ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ 110 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಈ ಪುಸ್ತಕದಲ್ಲಿ ಬಯಲು ಮಾಡಿದ್ದೇವೆ. ಭ್ರಷ್ಟರನ್ನು ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

