ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮಾಡಬೇಕು ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ಕೊಟ್ಟಿದ್ದಾರೆ.
ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಆದರೆ ಇದೀಗ ಈ ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

